✍️Madhav. K. Anjar ನನ್ನ ಹೃದಯ ಹಗುರಗೊಳಿಸಲಷ್ಟೇ..... ನೋವನ್ನು ಮರೆಸಿ ನನ್ನನ್ನು ನಾನು ಉಳಿಸುತ್ತ ಮಗುವಿನ ಅಗಲುವಿಕೆಯ ಸಾಂತ್ವನ ಬಿಟ್ಟು ಮತ್ತೇನು ಸಾಧ್ಯ ಭಗವಂತ 🙏🏿ಕ್ಷಮಿಸು. (ಲೇಖನ -102) "ಮರೆಯಲಾಗದ ಸಾನ್ವಿ ಮರೆಯಾದಳು " ಬದುಕು ಕೇವಲ ನಾಲ್ಕು ದಿನವೆಂಬದನು ತಿಳಿಸಿ ಮರೆಯಾದಳು ಸಾವಿಗೆ ವಯಸ್ಸಿನ ಅಂತರವಿಲ್ಲ, ನಮ್ಮ ಜೀವ, ಜೀವನ ಶಾಶ್ವತವಲ್ಲ ನಾವು ಯಾರೂ ಈ ಭೂಮಿಯಲ್ಲಿ ಕೇವಲ ಕೆಲವು ದಿನವಷ್ಟೇ! ನೀವೆಲ್ಲರೂ ಕ್ಷೇಮವಾಗಿರಿ, ದೇವರು ನನ್ನನ್ನು ಬಹಳವಾಗಿ ಇಷ್ಟಪಟ್ಟ ನನಗೆ ಆತನ ಪಾದ ಸೇರಲು ಅವಕಾಶ ಕೊಡಿ.... ನಾನೆಲ್ಲಿದ್ದರೂ ನಿಮ್ಮೊಳಗಿರುವೆ, ಬೇಸರ ಬೇಡ, ನನ್ನ ಅಪ್ಪ ಅಮ್ಮನ ಹೃದಯದಲ್ಲಿ ಹಾಯಾಗಿರುವೆ, ಅವರು ತಂದು ಕೊಟ್ಟ ಪ್ರತೀ ಉಡುಗೊರೆ, ಎಲ್ಲವೂ ನನಗೆ ತುಂಬಾ ಖುಷಿ ಕೊಟ್ಟಿದೆ, ಆದರೇನು ಮಾಡಲಿ ದೇವರು ಸುಮಾರು ತಿಂಗಳ ಹಿಂದೆಯೇ ಬರಹೇಳುತಿದ್ದ, ಬರಲಾರೆ ಎಂದು ಹೇಳಿದರೂ ಕೇಳಲಿಲ್ಲ ಕರೆದುಬಿಟ್ಟ. ಆ ಪುಟ್ಟ ಹೆಜ್ಜೆಗಳನ್ನೀಡುತ್ತ, ಅಂಗಳದಲ್ಲಿ ಅಣ್ಣ ತಮ್ಮ ತಂಗಿಯ ಜೊತೆಯಾಗಿ ಕಣ್ಣಮುಚ್ಚಾಲೆ, ಆಡಿದ ನೆನಪುಗಳು, ಅಪ್ಪ ಅಮ್ಮ ಗೆಳೆಯ ಗೆಳತಿಯರೊಂದಿಗೆ ಆಟವಾಡಿ ಸುಸ್ತಾಗಿ ರಾತ್ರಿ ಕನಸಲ್ಲೂ ನನ್ನ ಪ್ರೀತಿಯ ಎಲ್ಲರನ್ನು ನೋಡುತಿದ್ದೆ, ನಿಮ್ಮೆಲರ ನಗು ಆಶೀರ್ವಾದ ಚಿಕ್ಕ ನನ್ನ ಬದುಕಿನಲ್ಲಿ ಅಚ್ಚಳಿಯದೆ ಉಳಿಯಿತು. ನಾನೇನು ತೊಂದರೆ ಮಾಡಿದ್ದರೂ ಕ್ಷಮಿಸಿ...... ನನಗೆ ಕೊನೆಯ ಕ್ಷಣದಲ್ಲಿ ನೋವನ್ನು ತಡೆಯುವ ಶಕ್ತಿ ಆ
(ಲೇಖನ -122) ಭೂ - ಕೈಲಾಸ, ಕಲಾ ವೈಭವ - ಕುವೈತ್ ಕನ್ನಡ ಕೂಟದಿಂದ ಆಯೋಜಿಸಲ್ಪಟ್ಟ ದಾಸೋತ್ಸವ ಶೇಕಡಾ ನೂರರಷ್ಟು ಮನ ತಣಿಸಿತು, ಕಲಾ ಮಾತೆಯರು , ಕಲಾಗಾರರು ರೋಮಾಂಚನಗೊಳಿಸಿದ ದೃಶ್ಯಗಳ ಹಿಂದೆ ಸದ್ದಿಲ್ಲದೇ ಶ್ರಮವಹಿಸಿದ "ಶ್ರೀ ಸತೀಶ್ ಆಚಾರ್ಯ "ಇವರ ನಿರ್ದೇಶನ ಪ್ರೇಕ್ಷಕವರ್ಗದ ಹುಬ್ಬೆರಿಸಿತ್ತು, ಭೂ ಕೈಲಾಸದ ಪ್ರತಿಯೊಂದು ಭಾಗ ಚಪ್ಪಾಳೆಯೊಂದಿಗೆ ಮುಂದುವರಿಯುತಿತ್ತು. ಆರಂಭದಿಂದ ಕೊನೆಯವರೆಗೂ ಅಚ್ಚುಕಟ್ಟಾಗಿ ನಡೆದ ಕಾರ್ಯಕ್ರಮ ಚಿಣ್ಣರಿಂದ ಹಿರಿಯರವರೆಗೂ ಬಹಳಷ್ಟು ಸ್ಪಷ್ಟ ಮತ್ತು ಸಂತಸದ ವಾತಾವರಣದಿಂದ ಕೂಡಿತ್ತು. ರಾಮಾಯಣ, ಮಹಾಭಾರತದ ತುಣುಕುಗಳೊಂದಿಗೆ,ಭಕ್ತಿ ಮತ್ತು ರಸದೌತಣದ ಹಬ್ಬ ಕುವೈಟ್ ಕನ್ನಡ ಕೂಟದ ಮೆರುಗನ್ನು ಇನ್ನಷ್ಟು ಹೆಚ್ಚುಗೊಳಿಸಿತ್ತು. ಬಣ್ಣ ಬಣ್ಣದ ಉಡುಗೆ ತೊಡುಗೆ, ಪರಸ್ಪರರ ನಗು ಮುಖದ ಸಂಧರ್ಭಗಳೊಂದಿಗೆ ಕಾರ್ಯಕ್ರಮ ತೆರೆಕಂಡಿತು. ಇಲ್ಲಿ ಆಡಳಿತ ಮಂಡಳಿ, ಸರ್ವ ಸದಸ್ಯರ ನಿಸ್ವಾರ್ಥ ಸೇವೆ ಕನ್ನಡ ಕೂಟದ ಗೌರವ ದ್ವಿಗುಣಗೊಳಿಸುತ್ತಲೇ ಇದೆ. ಪ್ರತಿಯೊಬ್ಬರಲ್ಲೂ ಕಲೆಎಂಬುದಿದೆ ಹಾಗಾಗಿ ಪ್ರತೀ ಸದಸ್ಯರು ಮತ್ತು ಅವರ ಮಕ್ಕಳೂ ಒಂದಲ್ಲ ಒಂದು ರೀತಿಯಲ್ಲಿ ಭಾಗವಹಿಸಿ ಕಲೆಯನ್ನು ಉಳಿಸಿ ಬೆಳೆಸಲು ಸಹಾಯವಾಗುತ್ತಿದ್ದಾರೆ. ಭಜನೆ, ನಿರೂಪಣೆ, ಸಾತ್ವಿಕ ಆಹಾರ ಎಲ್ಲವೂ ಅಚ್ಚುಕಟ್ಟಾಗಿ ನಡೆದು ಕೂಟದ ಶಿಸ್ತನ್ನು ತೋರಿಸುತಿತ್ತು. ಬಾಲ್ಯದ ಸಮಯದಲ್ಲಿ ಕೇಳುತಿದ್ದ ಹರಿಕಥೆಯನ್ನು ವಿಶೇಷ ರೀತಿಯಲ್ಲಿ
✍️Madhav. K. Anjar (ಲೇಖನ - 101), "ಇತ್ತೆ ಗೊತ್ತಾಪುಜಿ "- ಇವಾಗ ಗೊತ್ತಾಗುವುದಿಲ್ಲ, ಈಗ ತಿಳಿಯದು,ಎಂಬ ತುಳು ನಾಟಕದೊಂದಿಗೆ ಸಮಾಜಕ್ಕೆ ಉತ್ತಮವಾದ ಸಂದೇಶವನ್ನು ಕೊಟ್ಟ ಬಿಲ್ಲವ ಸಂಘ ಕುವೈಟ್. ನ್ಯಾಯ ಎಲ್ಲಿದೆ? ಸೌಜನ್ಯಳಂತೆ ಅದೆಷ್ಟೋ ಹೆಣ್ಣುಮಕ್ಕಳ ಅತ್ಯಾಚಾರ ಮತ್ತು ಕೊಲೆಗಡುಕರಿಗೆ ನಮ್ಮ ಭಾರತೀಯ ನೆಲದಲ್ಲಿ ನ್ಯಾಯ ಮರೀಚಿಕೆ ಯಾಗಿದೆ ಎಂಬುವುದನ್ನು ತೋರಿಸಿಕೊಟ್ಟ ಈ ನಾಟಕದ ಸಾರಾಂಶ. ಅಂತರಾಷ್ಟ್ರೀಯ ಮಟ್ಟದಲ್ಲಿ ದನಿಯಾಗತೊಡಗಿದ ಸೌಜನ್ಯ ಪರ ನ್ಯಾಯ ಹೋರಾಟ. ಈ ಹಿಂದಿನ ಲೇಖನದಂತೆ ಕಲೆಯೊಂದು ಶಕ್ತಿ, ವಿವಿಧ ಕಲೆ ವಿವಿಧ ರೂಪದಲ್ಲಿ ಜನರನ್ನು ತಲುಪುತ್ತದೆ ಮತ್ತು ಜನರನ್ನು ರಂಜಿಸಿ, ಉತ್ತಮವಾದ ಸಂದೇಶವನ್ನು ಮನಸ್ಸಿಗೆ ಮುಟ್ಟುವಂತೆ ಮಾಡುತ್ತದೆ. ಒಂದು ಸುಂದರವಾದ ಕುಟುಂಬದಲ್ಲಿನ ಪ್ರೀತಿ, ಪ್ರೇಮ ಮತ್ತು ಮೊಬೈಲ್ ಬಳಕೆಯೊಂದಿಗೆ ಭಗ್ನ ಪ್ರೇಮಿಯ ಬಲೆಯಲ್ಲಿ ಸಿಕ್ಕಿ ಒಂದು ದುರಂತ ಅಂತ್ಯ ಕಂಡ ಹೆಣ್ಣು. ಹೌದು ಇದೆಷ್ಟೋ ಮನೆಯಲ್ಲಿ ನಡೆಯುವ ಘಟನೆಗಳು, ಕೆಲವೊಂದು ಪ್ರೇಮ ಪ್ರಕರಣಗಳು ಸುಖ ಅಂತ್ಯ ಕಂಡರೂ, ಹಲವಾರು ಪ್ರೇಮ ಪ್ರಕರಣಗಳು ದುರಂತ ಅಂತ್ಯ ಕಂಡಿರೋ ಘಟನೆಗಳು ಈ ಸಮಾಜದಲ್ಲಿ ನಡೆಯುತ್ತಿದೆ. ಪ್ರೀತಿಯ ಅಣ್ಣನ ಒಂದು ಮೊಬೈಲ್ ಕೊಡುಗೆ ತಂಗಿಯ ಜೀವನದಲ್ಲಿ ಬದಲಾವಣೆ, ಓದು ಬರಹ ಬದಿಗಿಟ್ಟು ಅಪರಿಚಿತನ ಪ್ರೇಮದ ಬಲೆಗೆ ಸಿಕ್ಕಿ ಕೊನೆಗೆ ಪ್ರೇಮಿಯಿಂದ ಮತ್ತು ಅವನ ಸ್ನೇಹಿತರಿಂದ ಅತ್ಯಾಚಾರ ಮತ್ತು ಹತ್ಯೆಯಾದ ಮುಗ್ದ
Comments
Post a Comment