ಬಂಟಾಯನ 2025 ಬಂಟೆರೆನ ಆಯನ = ಬಂಟಾಯನ, ಇದರ ಕನ್ನಡ ಅರ್ಥ ಬಂಟರ ಜಾತ್ರೆ, ತಾರೀಕು 21-11-2025 ರಂದು, ಕುವೈಟ್ ಅಬ್ಬಾಸಿಯದಲ್ಲಿ ಬಹಳ ಅದ್ಧುರಿಯಾಗಿ ನಡೆದ ಬಂಟಾಯನ ಹೊಸ ಮೆರುಗನ್ನು ಪಡೆದುಕೊಂಡಿತು. ಹೌದು, ಕುವೈಟ್ ನಲ್ಲಿ ಹಲವಾರು ಸಂಘಟನೆಗಳಂತೆ ಭಂಟರ ಕೂಟವೂ ಒಂದು, ತನ್ನ ಸಮಾಜದ ಏಳಿಗೆಗೆ ತನ್ನದೇ ಶೈಲಿಯಲ್ಲಿ ಪ್ರೋತ್ಸಾಹ, ಗೌರವ, ವೇದಿಕೆ ಶೃಷ್ಟಿ ಮಾಡಿ ಸಮಾಜದಲ್ಲಿ ಇನ್ನಷ್ಟು ಹೊಸ ಮುಖವನ್ನು ಪರಿಚಯ ಮಾಡುತ್ತ, ಬಂಟರ ಅಡಿಪಾಯವನ್ನು ಗಟ್ಟಿಗೊಳಿಸಿ ಇನ್ನುಳಿದವರಿಗೂ ಮಾದರಿಯಾಗಿ ಇರುತ್ತಿರುವುದು ಇತಿಹಾಸದಿಂದಲೇ ತಿಳಿದಿರುತ್ತೇವೆ. ಅದರಂತೆ ನಿನ್ನೆ ನಡೆದ ಬಂಟಾಯನ ಬಹಳಷ್ಟು ಅಚ್ಚುಕಟ್ಟಾಗಿ ನಡೆಯಿತು ಎಲ್ಲಾ ಪ್ರೇಕ್ಷಕರ ಮನಸೆಳೆಯಿತು, ಹೌದು ನಾವು ಬಂಟರು ಯಾವುದಕ್ಕೂ ಕಮ್ಮಿ ಇಲ್ಲ ಬಯಸಿದರೆ ಕನಸನ್ನು ನನಸು ಮಾಡುತ್ತೇವೆ ಎಂಬ ಸೂಚನೆಯನ್ನು ನೀಡಿದಂತಾಗಿದೆ. ಸಾಮಾನ್ಯವಾಗಿ ಕುವೈತ್ ನ ಹೆಚ್ಚಿನ ಸಂಘಟನೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಪಳಗಿರುವ ಬಂಟರು, ತನ್ನ ಸಮಾಜದ ಹೆಗ್ಗಳಿಕೆಯನ್ನು ಹೆಚ್ಚಿಸಲು ಪ್ರತ್ಯೇಕ ವೇದಿಕೆಯನ್ನು ಮಾಡಿ, ಸಮಾಜ ಬಾಂಧವರನ್ನು ಕರೆದು ಗೌರವ ನೀಡಿ ಸನ್ಮಾನ ಮಾಡಿ ಮುಂದಿನ ಪೀಳಿಗೆಗೂ ಮಾದರಿಯಾಗುತ್ತಿದ್ದಾರೆ. ಇಲ್ಲಿ ಎರಡು ವರುಷದ ಮಗುವಿನಿಂದ ಹಿಡಿದು ಹಿರಿಯ ವಯಸ್ಕರವರೆಗೂ ವೇದಿಕೆಯಲ್ಲಿ ತನ್ನ ಚಾಕಚಕ್ಯತೆಯನ್ನು ತೋರಿಸಿ ನೆರೆದವರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ...
ಕೃತಕ ಬುದ್ಧಿಮತ್ತೆ- ( Artificial Inteligence ) ಮತ್ತು ಬುದ್ಧಿವಂತಿಕೆ. ವಿಜ್ಞಾನ ಮುಂದುವರಿಯುತ್ತಿರುವಂತೆ ತಾಂತ್ರಿಕ ಕ್ಷೇತ್ರದಲ್ಲಿ ಬಹಳಷ್ಟು ಬೆಳವಣಿಗೆಗಳನ್ನು ಕಾಣುತ್ತಿರುವ ನಾವುಗಳು, ಇತ್ತೀಚಿನ ದಿನಗಳಲ್ಲಿ AI ಟೆಕ್ನಾಲಜಿಯನ್ನು ಹೆಚ್ಚಾಗಿ ಉಪಯೋಗಿಸಿಕೊಳ್ಳುತ್ತಿದ್ದೇವೆ. ಅದರಲ್ಲೂ ವಿಭಿನ್ನ ಕಂಪನಿಗಳ ವಿವಿಧ ತರಹದ ಅಪ್ಲಿಕೇಶನ್ ಅಭಿವೃದ್ಧಿ ಪಡಿಸಿ ತನ್ನ ಗ್ರಾಹಕರನ್ನು ಬೆಳೆಸಿಕೊಳ್ಳುತ್ತಿದೆ. ಈ AI ಟೆಕ್ನಾಲಜಿ, ರೋಬೋಟ್, ಕಂಪ್ಯೂಟರ್, ವಿಮಾನ, ಮೊಬೈಲ್ ಹಾಗೂ ಯುದ್ಧ ತಂತ್ರಗಳಲ್ಲಿ ಕೂಡ ಉಪಯೋಗಿಸುವ ಮಟ್ಟಿಗೆ ಬೆಳೆದಿದ್ದು ಇದೊಂದು ಬಹಳ ದೊಡ್ಡ ಬದಲಾವಣೆಯಾಗಿದೆ. ಅದರೊಂದಿಗೆ ಅವಲಂಬಿತಾರಗುತ್ತಿರುವ ನಾವು ನಮ್ಮ ಸ್ವತಃ ಬುದ್ದಿವಂತಿಕೆಯನ್ನು ತೀರಾ ಕಡಿಮೆಯಾಗಿ ಉಪಯೋಗಿಸುವ ಮಟ್ಟಕ್ಕೆ ಬರುತ್ತಿದ್ದೆವೋ ಅನಿಸುತ್ತಿದೆ. ಅದರಲ್ಲೂ ಒಂದು ಕಾಲದಲ್ಲಿ ತೆಗೆದ ಕಪ್ಪು ಬಿಳಿ ಚಿತ್ರಗಳನ್ನು ಇಂದಿನ ಯುಗದಲ್ಲಿ ಕುಣಿಯುವಂತೆ, ಮಾತನಾಡುವಂತೆ ಮಾಡುತ್ತಿರುವ AI ಇನ್ನೂ ಮುಂದಿನ ದಿನಗಳಲ್ಲಿ ಏನೆಲ್ಲಾ ಮಾಡಬಹುದು ಅಲ್ಲವೇ? ಇಲ್ಲಿ ಮನುಷ್ಯನ ಬುದ್ದಿವಂತಿಕೆ ಏನನ್ನೂ ಮಾಡಬಹುದು ಎಂಬ ಸಂದೇಶ ಕೊಡುತ್ತಿದೆ. ಕೃತಕ ಬುದ್ದಿವಂತಿಕೆ ಬುದ್ದಿವಂತರಿಂದಲೇ ಮಾಡಲ್ಪಟಿದ್ದು ಆದರೆ ಅದನ್ನು ತಿಳಿಯದ ಇಂದಿನ ಕೆಲವು ಮಕ್ಕಳು ತನ್ನ ದೈನಂದಿನ ಚಟುವಟಿಕೆಗಳಲ್ಲಿ ಅತಿಯಾಗಿ ಅವಲಂಬಿತರಾಗುತ್ತಿದ್ದ...
ಮೌನ ಮಾತು - ಪ್ರೀತಿ ಮಾತು ನಮಸ್ಕಾರ, ಮಾತು ಬೆಳ್ಳಿ ಮೌನ ಬಂಗಾರ - ಈ ಗಾದೆ ಮಾತು ಕೇಳಿದ್ದಿರಬಹುದು. ಒಂದೊಂದು ಗಾದೆ ಮಾತುಗಳು ಆಳವಾದ ಅರ್ಥವನ್ನು ಹೊಂದಿರುತ್ತದೆ. ಗಾದೆ ರೂಪದಲ್ಲಿ ಬಂದ ವಾಕ್ಯಗಳು, ಅಥವಾ ನುಡಿಗಳು ಒಬ್ಬ ಯೋಗಿ, ವಿದ್ವಾಂಸ, ಕವಿ, ಅಪಾರ ಜ್ಞಾನವುಳ್ಳ ವ್ಯಕ್ತಿಗಳಿಂದ ಶೃಷ್ಟಿಯಾಗಿರುತ್ತದೆ. ಸಾವಿರಾರು ಪದಗಳನ್ನು ಒಂದು ವಾಕ್ಯದಲ್ಲಿ ಉಲ್ಲೇಖ ಮಾಡುವ ಸಾಮರ್ಥ್ಯ ಕೆಲವೇ ಕೆಲವರಲ್ಲಿ ಬರುತ್ತದೆ. ಹೌದು, ನಿನ್ನ ಪ್ರತಿಯೊಂದು ಮಾತು, ಮೌನ, ಪ್ರೀತಿ, ಕರುಣೆ ನಿನ್ನ ವ್ಯಕ್ತಿತ್ವ ತಿಳಿಸುತ್ತದೆ. ನಿನ್ನ ಭಾವನೆಗಳು ಕೆಲವೊಮ್ಮೆ ಮಾತಿನ ಮೂಲಕ ಹೊರಹೊಮ್ಮಿದರೆ, ಮೌನ, ಕೋಪದಲ್ಲೂ ವ್ಯಕ್ತವಾಗುತ್ತದೆ. ನೀನಾಡುವ ಮಾತು ನಿನಗೆ ಖುಷಿಕೊಟ್ಟರೆ ಸಾಲದು, ನಿನ್ನೆದುರಿನ ಜನರಿಗೆ ಬೇಸರ ತರಿಸದಂತೆ ಜಾಗ್ರತೆ ಹಿಸಿಕೊಳ್ಳಬೇಕಾಗುತ್ತದೆ. ಅದರರ್ಥ ಸಮಯಕ್ಕೆ ತಕ್ಕಂತೆ ಮಾತನಾಡಬೇಕೆಂದೇನಿಲ್ಲ, ಅಥವಾ ಎದುರಿಗೆ ನಿಂತವನ ಓಲೈಕೆ ಮಾಡುವ ಮಾತನ್ನಾಡುವ ಅಭ್ಯಾಸ ಮಾಡಿಕೊಳ್ಳಬೇಡ. ನಾವೆಷ್ಟೋ ಸಂಧರ್ಭಗಳನ್ನು ನೋಡುತ್ತೇವೆ, ಮನಸಾರೆ ಮಾತನಾಡುವ, ಅಥವಾ ಕಲ್ಮಶವಿಲ್ಲದೆ ಮಾತನಾಡುವ ಮಾತುಗಳು ಸದಾ ನಗು, ಪ್ರಾಮಾಣಿಕತೆಯಿಂದಿರುತ್ತದೆ , ಸತ್ಯವಾಗಿರುತ್ತದೆ. ಮುಖದ ಭಾವನೆಗಳು ಇನ್ನಷ್ಟು ಮಾತನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ. ಸದಾ ನಗುತ್ತಾ ಮಾತನಾಡುವ ಜನರು ಹೆಚ್ಚು ನೋವಿನಿಂದ ಇರುತ್ತಾರೆ ಮತ್ತು ಅಂಥವರು ಇನ...
Comments
Post a Comment